‘ಕಳೆದ 15 ತಿಂಗಳುಗಳಲ್ಲಿ ಮಧ್ಯಪ್ರದೇಶದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ್ದೇನೆ. ಬಿಜೆಪಿಗೆ 15 ವರ್ಷಗಳು ದೊರೆತಿದ್ದವು, ಆದರೆ ನನಗೆ 15 ತಿಂಗಳುಗಳಷ್ಟೇ ದೊರೆತವು. ಈ ಅವಧಿಯಲ್ಲಿ ಬಿಜೆಪಿ ಹೂಡಿದ ಸಂಚು ಏನೆಂಬುದು ಮಧ್ಯಪ್ರದೇಶದ ಜನತೆಗೆ ತಿಳಿದಿದೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ನಾವು ಮಾಡಿರುವ ಕೆಲಸಗಳು ಜನರಿಗೆ ತಿಳಿದಿದೆ. ಅವರೇ ನ್ಯಾಯ ಒದಗಿಸಿಕೊಡಲಿದ್ದಾರೆ’ ಎಂದು ಕಮಲ್ ನಾಥ್ ಹೇಳಿದರು.