<p><strong>ಮುಂಬೈ:</strong> ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಕನ್ನಡಿಗ ಜಸ್ಟಿಸ್ ಹೊಸಬೆಟ್ಟು ಸುರೇಶ್ (91) ಗುರುವಾರ ಮುಂಬೈನಲ್ಲಿ ನಿಧನರಾಗಿದ್ದಾರೆ.</p>.<p>ಮೂಲತಃ ಸುರತ್ಕಲ್ ಬಳಿಯ ಹೊಸಬೆಟ್ಟು ಗ್ರಾಮದವರಾದ ಅವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತರಾದ ನಂತರ ಮುಂಬೈನಲ್ಲೇ ನೆಲೆಸಿದ್ದರು.</p>.<p>1929ರ ಜೂನ್ 11ರಂದು ಹೊಸಬೆಟ್ಟು ಗ್ರಾಮದಲ್ಲಿ ಜನಸಿದ್ದ ಅವರುಸುರತ್ಕಲ್ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿದ್ದರು. ಮಂಗಳೂರು ಸ್ನಾತಕೋತ್ತರ ಕೇಂದ್ರದಿಂದ ಪದವಿ ಪಡೆದ ನಂತರ ಕಾನೂನು ಅಧ್ಯಯನಕ್ಕೆ ಮುಂಬೈಗೆ ತೆರಳಿದ್ದರು.</p>.<p>ಬಾಂಬೆ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ಸ್ನಾತಕೋತ್ತರ ಪದವಿ ಪಡೆದು, 1953ರಲ್ಲಿ ಬಾಂಬೆ ಹೈಕೋರ್ಟ್ನಲ್ಲಿ ವಕೀಲಿಕೆ ಆರಂಭಿಸಿದ್ದರು. ಮುಂಬೈ ಕೆ.ಸಿ. ಕಾನೂನು ಮಹಾವಿದ್ಯಾಲಯದಲ್ಲಿ ಗೌರವ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.</p>.<p>1987ರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡಿದ್ದ ಹೊಸಬೆಟ್ಟು, 1991ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿ ನಂತರ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಣೆಗೆ ನೇಮಕವಾಗಿದ್ದ ಹಲವಾರು ಸಮಿತಿಗಳ ನೇತೃತ್ವ ವಹಿಸಿದ್ದರು.</p>.<p>ಮಾನವ ಹಕ್ಕುಗಳ ಬಗ್ಗೆ ತುಂಬಾ ಕಾಳಜಿ ಹೊಂದಿದ್ದ ಅವರು, ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದರು. ಮುಂಬೈನಲ್ಲಿ ನೆಲೆಸಿದ್ದರೂ ಕರ್ನಾಟಕ, ಕನ್ನಡಿಗರ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು.</p>.<p>ಗುಜರಾತ್ ಗೋಧ್ರಾ ಹತ್ಯಾಕಾಂಡದ ಕುರಿತು ಹೊಸಬೆಟ್ಟು, ಪಿ.ಬಿ.ಸಾವಂತ್ ಅವರನ್ನು ಒಳಗೊಂಡಿದ್ದ ನ್ಯಾಯಮೂರ್ತಿ ವಿ. ಆರ್ ಕೃಷ್ಣ ಅಯ್ಯರ್ ನೇತೃತ್ವದ ಸಮಿತಿ (ಐಪಿಟಿ ಸತ್ಯಶೋಧನಾ ಸಮಿತಿ) ‘Crime Against Humanity’ ಎಂಬ ವರದಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಕನ್ನಡಿಗ ಜಸ್ಟಿಸ್ ಹೊಸಬೆಟ್ಟು ಸುರೇಶ್ (91) ಗುರುವಾರ ಮುಂಬೈನಲ್ಲಿ ನಿಧನರಾಗಿದ್ದಾರೆ.</p>.<p>ಮೂಲತಃ ಸುರತ್ಕಲ್ ಬಳಿಯ ಹೊಸಬೆಟ್ಟು ಗ್ರಾಮದವರಾದ ಅವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತರಾದ ನಂತರ ಮುಂಬೈನಲ್ಲೇ ನೆಲೆಸಿದ್ದರು.</p>.<p>1929ರ ಜೂನ್ 11ರಂದು ಹೊಸಬೆಟ್ಟು ಗ್ರಾಮದಲ್ಲಿ ಜನಸಿದ್ದ ಅವರುಸುರತ್ಕಲ್ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿದ್ದರು. ಮಂಗಳೂರು ಸ್ನಾತಕೋತ್ತರ ಕೇಂದ್ರದಿಂದ ಪದವಿ ಪಡೆದ ನಂತರ ಕಾನೂನು ಅಧ್ಯಯನಕ್ಕೆ ಮುಂಬೈಗೆ ತೆರಳಿದ್ದರು.</p>.<p>ಬಾಂಬೆ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ಸ್ನಾತಕೋತ್ತರ ಪದವಿ ಪಡೆದು, 1953ರಲ್ಲಿ ಬಾಂಬೆ ಹೈಕೋರ್ಟ್ನಲ್ಲಿ ವಕೀಲಿಕೆ ಆರಂಭಿಸಿದ್ದರು. ಮುಂಬೈ ಕೆ.ಸಿ. ಕಾನೂನು ಮಹಾವಿದ್ಯಾಲಯದಲ್ಲಿ ಗೌರವ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.</p>.<p>1987ರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡಿದ್ದ ಹೊಸಬೆಟ್ಟು, 1991ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿ ನಂತರ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಣೆಗೆ ನೇಮಕವಾಗಿದ್ದ ಹಲವಾರು ಸಮಿತಿಗಳ ನೇತೃತ್ವ ವಹಿಸಿದ್ದರು.</p>.<p>ಮಾನವ ಹಕ್ಕುಗಳ ಬಗ್ಗೆ ತುಂಬಾ ಕಾಳಜಿ ಹೊಂದಿದ್ದ ಅವರು, ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದರು. ಮುಂಬೈನಲ್ಲಿ ನೆಲೆಸಿದ್ದರೂ ಕರ್ನಾಟಕ, ಕನ್ನಡಿಗರ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು.</p>.<p>ಗುಜರಾತ್ ಗೋಧ್ರಾ ಹತ್ಯಾಕಾಂಡದ ಕುರಿತು ಹೊಸಬೆಟ್ಟು, ಪಿ.ಬಿ.ಸಾವಂತ್ ಅವರನ್ನು ಒಳಗೊಂಡಿದ್ದ ನ್ಯಾಯಮೂರ್ತಿ ವಿ. ಆರ್ ಕೃಷ್ಣ ಅಯ್ಯರ್ ನೇತೃತ್ವದ ಸಮಿತಿ (ಐಪಿಟಿ ಸತ್ಯಶೋಧನಾ ಸಮಿತಿ) ‘Crime Against Humanity’ ಎಂಬ ವರದಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>