‘ರಾಜೀವ್ ಗಾಂಧಿ ಅವರ ಸಾವಿನ ಬಗ್ಗೆ ಮೋದಿ ಟೀಕೆ ಮಾಡಿರಲಿಲ್ಲ. ಬದಲಿಗೆ, ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದರು. ಕರ್ಮ ಯಾರನ್ನೂ ಬಿಡುವುದಿಲ್ಲ. ಕಾಂಗ್ರೆಸ್ನವರು ಸಹ ತಾವು ಮಾಡಿರುವ ಕರ್ಮಗಳಿಗೆ ಭಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.