ವಿಧಾನಸಭೆ ಸದಸ್ಯತ್ವಕ್ಕೆರಾಜೀನಾಮೆ ನೀಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ನ 13 ಮಂದಿ ಶಾಸಕರು ಸದ್ಯ ಮುಂಬೈನ ಸೋಫಿಟೆಲ್ ಹೋಟೆಲ್ನಲ್ಲಿ ತಂಗಿದ್ದಾರೆ. ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅತೃಪ್ತ ಶಾಸಕರು ಬೆಂಗಳೂರಿಗೆ ಹಿಂದಿರುಗಿ ಬಂದು ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.
ಈ ನಡುವೆ ಸರ್ಕಾರದ ‘ಎಲ್ಲ ಮಂತ್ರಿಗಳೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಪುಟ ಪುನಾರಚನೆ ಮಾಡಲಾಗುತ್ತಿದ್ದು, ಅತೃಪ್ತಿ ಇರುವ ಶಾಸಕರೆಲ್ಲರೂ ಮರಳಿ ಬೆಂಗಳೂರಿಗೆ ಬಂದರೆ, ಅವರ ಸಮಸ್ಯೆಗಳನ್ನು ಆಲಿಸಲಾಗುವುದು,’ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಮಂತ್ರಿ ಸ್ಥಾನದಿಂದ ವಂಚಿತರಾದ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವ ಶಾಸಕರು ಬಿಜೆಪಿಯ ಆಮಿಷಗಳಿಗೆ ಬಲಿಯಾಗದೆ ರಾಜೀನಾಮೆ ವಾಪಸ್ಸು ಪಡೆಯಿರಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಮಾಡುತ್ತೇವೆ ಎಂದು ಪಕ್ಷದ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ. ನಾವು ಈಗಾಗಲೇ ಮಂತ್ರಿಮಂಡಲ ಪುನರ್ ರಚನೆ ನಿರ್ಧಾರಕ್ಕೆ ಸಹ ಬಂದಿದ್ದೇವೆ.