ಶೋಧ, ರಕ್ಷಣಾ ಕಾರ್ಯಗಳಿಗೆ ಬೀದಿನಾಯಿಗಳನ್ನು ಬಳಸಿಕೊಳ್ಳಬಹುದು. ಪೊಲೀಸ್ ಇಲಾಖೆಗೆ ಇವುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ಮಾಹಿತಿ ನೀಡಲಾಗಿದೆ. ಈ ಯೋಜನೆ ಜಾರಿಯಾದಲ್ಲಿ, ಉತ್ತಮ ತಳಿಯ ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳುವುದೂ ಸೇರಿದಂತೆ ಹಲವು ಸಕಾರಾತ್ಮಕ ಯತ್ನಗಳಿಗೆ ಇದು ಪ್ರೇರಣೆಯಾಗಲಿದೆ.