‘ನನ್ನ ತಂದೆ ತಲೆಮರೆಸಿಕೊಂಡಿರಲಿಲ್ಲ. ನನ್ನ ತಂದೆಗೆ ಸಮನ್ಸ್ ನೀಡಿದಾಗಲೆಲ್ಲಾ ಅವರು ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಿ, ತನಿಖೆ ಎದುರಿಸಿದ್ದಾರೆ. ಈವರೆಗೆ ಸಿಬಿಐ ಒಮ್ಮೆ ಮಾತ್ರ ಅವರಿಗೆ ಸಮನ್ಸ್ ನೀಡಿತ್ತು. ಜಾರಿ ನಿರ್ದೇಶನಾಲಯವು ಹಲವು ಬಾರಿ ಸಮನ್ಸ್ ನೀಡಿತ್ತು. ಪ್ರತಿ ಬಾರಿಯೂ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಇದೆಲ್ಲವನ್ನೂ ನಾವು ನ್ಯಾಯಾಲಯದಲ್ಲಿ ಎದುರಿಸುತ್ತೇವೆ’ ಎಂದು ಕಾರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.