ಹಾಸನ: ವಿಧಾನಸಭಾ ಚುನಾವಣೆಯಲ್ಲಿ 113 ಸ್ಥಾನ ಗೆಲ್ಲುವುದೇ ಗುರಿಯಾಗಿದ್ದು, ಜೆಡಿಎಸ್ ಸ್ವಂತ ಶಕ್ತಿಯಿಂದ ಸರ್ಕಾರ ರಚನೆ ಮಾಡಲಿದೆ ಎಂದು ಸಂಸದ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.‘ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಕಾಂಗ್ರೆಸ್ 76, ಜೆಡಿಎಸ್ 75 ಹಾಗೂ ಬಿಜೆಪಿ 75 ಎಂದು ವರದಿಗಳು ಬಂದಿವೆ. ಇಂತಹ ಸಮೀಕ್ಷೆ ನೋಡಿಕೊಂಡು ಸುಮ್ಮನೆ ಇರುವುದಿಲ್ಲ. ಇನ್ನೂ 45 ದಿನ ಇದೆ. ಅಷ್ಟೂ ದಿನ ವಿರಮಿಸದೇ ರಾಜ್ಯ ಸುತ್ತುತ್ತೇನೆ. ರಾಜ್ಯಕ್ಕೆ ಅಲ್ಪ ಸ್ವಲ್ಪ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯದ ಬಗ್ಗೆ ಬೇರೆಯವರಿಂದ ಹೇಳಿಸಿಕೊಳ್ಳಬೇಕಿಲ್ಲ. ಹಣದ ಕೊರತೆ ಇದೆ. ಆದರೆ, ಜನರ ಆಶೀರ್ವಾದ ಹಾಗೂ ಹೋರಾಟ ಮಾಡುವ ಚೈತನ್ಯವಿದೆ. ಎಚ್.ಡಿ.ಕುಮಾರಸ್ವಾಮಿಯನ್ನು ನಾನು ಮುಖ್ಯಮಂತ್ರಿ ಮಾಡಬೇಕು ಎನ್ನುತ್ತಿಲ್ಲ. ಜನರೇ ಹೇಳುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.