‘ಬಂದ್ ವೇಳೆ ಉತ್ತರ ಭಾರತದಲ್ಲಿ ಆಗಿರುವ ಹಿಂಸಾಚಾರಕ್ಕೆ ಪ್ರತಿಪಕ್ಷದ ಎಲ್ಲರೂ ಹೊಣೆಗಾರರು. ಮೀಸಲಾತಿ ರದ್ದಾಗುತ್ತಿದೆ ಎನ್ನುವ ಸುಳ್ಳುಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಬಿಜೆಪಿ, ಮೀಸಲಾತಿ ರದ್ದು ಮಾಡುವುದಿಲ್ಲ. ಸಂವಿಧಾನಾತ್ಮಕ ರಕ್ಷಣೆ ಇರುವ ದಲಿತರಿಗೆ ನೀಡಲಾದ ಹಕ್ಕುಗಳನ್ನು ಕಿತ್ತುಕೊಳ್ಳುವ, ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ. ನಾವು ಮೀಸಲಾತಿ ಪರವಾಗಿ ಇದ್ದೇವೆ. ರಾಜಕೀಯ ಲಾಭಕ್ಕಾಗಿ ಜನರನ್ನು ಹಾದಿ ತಪ್ಪಿಸಲಾಗುತ್ತಿದೆ’ ಎಂದು ಟೀಕಿಸಿದರು.