ಒಂದು ವಾರದ ಮಟ್ಟಿಗೆ ಎಲ್ಲ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ ಹಾಗೂ ಅಂಗಡಿಗಳು ಬೆಳಿಗ್ಗೆ 11ರಿಂದ ಸಂಜೆ 5ರ ವರೆಗೆ ಮಾತ್ರ ತೆರೆದಿರಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ. ಈ ನಡುವೆ, ಕೋವಿಡ್ನಿಂದ ಬಳಲುತ್ತಿದ್ದ ವ್ಯಕ್ತಿಯೊಂದಿಗೆ ಸಂಪರ್ಕ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು, ತಾವೇ ಸ್ವತಃ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.