<p><strong>ಶ್ರೀನಗರ: </strong>ಕೋವಿಡ್ 19 ಸೋಂಕಿನಿಂದ ಇಲ್ಲಿನ ಎದೆರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 65 ವರ್ಷದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.<br /><br />ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಸೋಂಕಿನಿಂದ ಉಂಟಾದ ಮೊದಲ ಸಾವು ಇದಾಗಿದೆ. ಈ ವ್ಯಕ್ತಿಯು ಹಲವು ದಿನಗಳಿಂದ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದರು.<br /><br />ದೆಹಲಿಯಿಂದ ಈಚೆಗಷ್ಟೇ ಕಾಶ್ಮೀರದ ಶ್ರೀನಗರಕ್ಕೆ ಬಂದಿದ್ದ ಇವರು ದೆಹಲಿ ಹಾಗೂ ಉತ್ತರ ಪ್ರದೇಶದ ವಿವಿಧೆಡೆ ನಡೆದಿದ್ದ ಧಾರ್ಮಿಕ ಸಭೆಯಲ್ಲಿ (ತಬ್ಲಿಘಿ ಜಮಾತ್) ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಮಲೇಷ್ಯಾ ಹಾಗೂ ಇಂಡೊನೇಷ್ಯಾದ ಹಲವು ಜನರು ಭಾಗವಹಿಸಿದ್ದರು.<br /><br />ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 11 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖರಾಗಿದ್ದಾರೆ.<br /><br />ಕೇಂದ್ರಾಡಳಿತ ಪ್ರದೇಶವಾದ ಲಡಾಕ್ನಲ್ಲಿ ದಾಖಲಾಗಿದ್ದ 13 ಮಂದಿಯಲ್ಲಿ ಗುರುವಾರ ಮೂವರಿಗೆ ಸೋಂಕು ದೃಢಪಟ್ಟಿಲ್ಲ ಎಂದು ಇಲ್ಲಿನ ಸರ್ಕಾರದ ವಕ್ತಾರ ವಕ್ತಾರ ರಗ್ಜಿನ್ ಸಂಪೆಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಕೋವಿಡ್ 19 ಸೋಂಕಿನಿಂದ ಇಲ್ಲಿನ ಎದೆರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 65 ವರ್ಷದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.<br /><br />ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಸೋಂಕಿನಿಂದ ಉಂಟಾದ ಮೊದಲ ಸಾವು ಇದಾಗಿದೆ. ಈ ವ್ಯಕ್ತಿಯು ಹಲವು ದಿನಗಳಿಂದ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದರು.<br /><br />ದೆಹಲಿಯಿಂದ ಈಚೆಗಷ್ಟೇ ಕಾಶ್ಮೀರದ ಶ್ರೀನಗರಕ್ಕೆ ಬಂದಿದ್ದ ಇವರು ದೆಹಲಿ ಹಾಗೂ ಉತ್ತರ ಪ್ರದೇಶದ ವಿವಿಧೆಡೆ ನಡೆದಿದ್ದ ಧಾರ್ಮಿಕ ಸಭೆಯಲ್ಲಿ (ತಬ್ಲಿಘಿ ಜಮಾತ್) ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಮಲೇಷ್ಯಾ ಹಾಗೂ ಇಂಡೊನೇಷ್ಯಾದ ಹಲವು ಜನರು ಭಾಗವಹಿಸಿದ್ದರು.<br /><br />ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 11 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖರಾಗಿದ್ದಾರೆ.<br /><br />ಕೇಂದ್ರಾಡಳಿತ ಪ್ರದೇಶವಾದ ಲಡಾಕ್ನಲ್ಲಿ ದಾಖಲಾಗಿದ್ದ 13 ಮಂದಿಯಲ್ಲಿ ಗುರುವಾರ ಮೂವರಿಗೆ ಸೋಂಕು ದೃಢಪಟ್ಟಿಲ್ಲ ಎಂದು ಇಲ್ಲಿನ ಸರ್ಕಾರದ ವಕ್ತಾರ ವಕ್ತಾರ ರಗ್ಜಿನ್ ಸಂಪೆಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>