ಕೆಲವೇ ದಿನಗಳಲ್ಲಿ ಪರಿಸ್ಥಿತಿ ತಿಳಿಯಾಗಲಿದೆ. ಅಲ್ಲಿಗೆ ಯೋಧರು ಮತ್ತು ಅರೆಸೇನಾ ಪಡೆಗಳನ್ನು ಕಳುಹಿಸಲಾಗಿದೆ. ಸರ್ಕಾರ ಕೈಗೊಂಡ ನಿರ್ಧಾರಗಳು ಸಂವಿಧಾನಬದ್ಧವಾಗಿವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಾಗ ಅನನುಕೂಲ ಸ್ಥಿತಿ ಕನಿಷ್ಠವಾಗಿರುವಂತೆ ನೋಡಿಕೊಳ್ಳಬೇಕು. 1990ರಿಂದಲೇ ಅಲ್ಲಿ ಪರಿಸ್ಥಿತಿ ಕೆಟ್ಟದಾಗಿದೆ. 2016ರಲ್ಲಿ ಇಂತಹುದೇ ಪರಿಸ್ಥಿತಿ ನಿರ್ಮಾಣ ಆಗಿ, 40 ಜನರು ಜೀವ ಕಳೆದುಕೊಂಡಿದ್ದರು. ಆದರೆ, ಈ ಬಾರಿ ಒಂದು ಜೀವಹಾನಿಯೂ ಆಗಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೇಳಿದರು.