ಸಂಘಟನೆಯ ಅಧ್ಯಕ್ಷ ಅಜಯ್ ಚ್ರುಂಗೂ ಸೇರಿದಂತೆ ಇತರೆ ಹಲವಾರು ನಾಯಕರೊಂದಿಗಿದ್ದ ಅಗ್ನಿಶೇಖರ್, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದ ಧಾರ್ಮಿಕ ದೌರ್ಜನ್ಯಕ್ಕೊಳಗಾದ ಹಿಂದೂಗಳಿಗೆ ಭಾರತದ ಪೌರತ್ವ ನೀಡುವ ನಿರ್ಧಾರವು ವಸಾಹತುಶಾಹಿ ಗುಲಾಮಗಿರಿಯ ವೇಳೆಯಲ್ಲಿ ಹಿಂದೂಗಳ ಮೇಲೆ ಉಂಟಾದ ಹಾನಿಯನ್ನು ಪರಿಹರಿಸಲು ಮೋದಿ ಸರ್ಕಾರದ ಮಹತ್ವದ ನಿರ್ಧಾರವಾಗಿದೆ ಎಂದು ಹೇಳಿದರು.