ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಯುಕ್ತ ರಂಗಕ್ಕೆ ಜೀವ: ಕೆಸಿಆರ್‌ ಯತ್ನ

Last Updated 6 ಮೇ 2019, 18:09 IST
ಅಕ್ಷರ ಗಾತ್ರ

ಹೈದರಾಬಾದ್‌: ಲೋಕಸಭಾ ಚುನಾವಣೆಯ ಐದು ಹಂತಗಳ ಮತದಾನ ಪೂರ್ಣಗೊಳ್ಳುತ್ತಿದ್ದಂತೆಯೇ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಂಡ ಪಕ್ಷಗಳ ಸಂಯುಕ್ತ ರಂಗ ರಚನೆಯ ಚಟುವಟಿಕೆಗಳೂ ಚುರುಕುಗೊಂಡಿವೆ.

ತೆಲಂಗಾಣದ ಮುಖ್ಯಮಂತ್ರಿ, ಟಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್‌ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಹಲವು ನಾಯಕರ ಭೇಟಿ ಆರಂಭಿಸಿದ್ದಾರೆ.

ಸೋಮವಾರ ಸಂಜೆ ತಿರುವನಂತಪುರಕ್ಕೆ ತೆರಳಿ ಪಿಣರಾಯಿ ವಿಜಯನ್‌ ಅವರನ್ನು ಭೇಟಿಮಾಡಿದ್ದಾರೆ.

‘ಮೇ 13ರಂದು ಚೆನ್ನೈಗೆ ಭೇಟಿ ನೀಡಲಿರುವ ಕೆಸಿಆರ್‌, ಅಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್‌ ಅವರನ್ನು ಭೇಟಿ ಮಾಡಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಈಗಾಗಲೇ ದೂರವಾಣಿ ಮೂಲಕ ಕೆಸಿಆರ್‌ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ’ ಎಂದು ತೆಲಂಗಾಣದ ಮುಖ್ಯಮಂತ್ರಿ ಕಚೇರಿಯಿಂದ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT