ಪಂಜಾಬ್ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಪರ ಪ್ರಚಾರದಲ್ಲಿ ತೊಡಗಿದ್ದ ಅವರು, ಮಾಧ್ಯಮಪ್ರತಿನಿಧಿ ಜೊತೆ ಮಾತನಾಡುತ್ತ, ‘ಮತದಾನಕ್ಕೂ 48 ಗಂಟೆ ಮುಂಚಿನವರೆಗೂ ದೆಹಲಿಯ ಏಳು ಕ್ಷೇತ್ರಗಳಲ್ಲೂ ಎಎಪಿ ಗೆಲ್ಲಬಹುದು ಎಂಬ ಸ್ಥಿತಿ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರಣ ಬದಲಾಗಿ ಮುಸ್ಲಿಮರೆಲ್ಲರೂ ಕಾಂಗ್ರೆಸ್ನತ್ತ ವಾಲಿದರು. ಈ ಬದಲಾವಣೆಗೆ ಕಾರಣವೇನು ಎಂದು ತಿಳಿಯುವ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ’ ಎಂದರು.