ಕಳೆದ ಶನಿವಾರ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಈ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರು.ಚರ್ಚಿನ ಫಾದರ್ ಜೊಸ್ ಪಾರ್ಥುವಯಲಿಲ್ ಪ್ರಜಾವಾಣಿ ಜೊತೆ ಮಾತನಾಡಿ, ಈ ಚರ್ಚ್ ಒಂದು ಯಾತ್ರಾ ಸ್ಥಳವಾಗಿದೆ, ಎಲ್ಲಾ ಸಮುದಾಯದ ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದೇ ಮೊದಲ ಬಾರಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಸಹೋದರತೆ ಸಾರುವುದು ನಮ್ಮ ಉದ್ದೇಶ ಎಂದು ಅವರು ಹೇಳಿದ್ದಾರೆ.