<p><strong>ನವದೆಹಲಿ:</strong>ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಕಾಯ್ದೆ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್ಗೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಸಿಎಎ ಪ್ರಶ್ನಿಸಿ ರಾಜ್ಯ ಸರ್ಕಾರವೊಂದು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿರುವುದು ಇದೇ ಮೊದಲು.</p>.<p>ಸಮಾನತೆಯ ಹಕ್ಕು ಸೇರಿದಂತೆ ಸಂವಿಧಾನದಲ್ಲಿರುವ ಅನೇಕ ಅಂಶಗಳನ್ನು ಸಿಎಎಯಲ್ಲಿ ಉಲ್ಲಂಘಿಸಲಾಗಿದೆ. ಈ ಕಾಯ್ದೆಯು ಸಂವಿಧಾನದ ಮೂಲತತ್ವವಾದ ಜಾತ್ಯತೀತತೆಗೆ ವಿರುದ್ಧವಾದದ್ದು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.</p>.<p>ಸಂವಿಧಾನದ ವಿಧಿ 14, 21 ಮತ್ತು 25 ಅನ್ನು ಸಿಎಎಯಲ್ಲಿ ಉಲ್ಲಂಘಿಸಲಾಗಿದೆ ಎಂದೂ ಕೇರಳ ಸರ್ಕಾರ ಹೇಳಿದೆ.</p>.<p>2015ರ ಮೊದಲು ಪಾಕಿಸ್ತಾನ, ಆಫ್ಗಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಭಾರತಕ್ಕೆ ಬಂದ ಮುಸ್ಲಿಮೇತರ ವಲಸಿಗರ ವಾಸವನ್ನು ಕ್ರಮಬದ್ಧಗೊಳಿಸುವುದಕ್ಕೆ ಸಂಬಂಧಿಸಿದ ‘ವಿದೇಶಿಗರ ತಿದ್ದುಪಡಿ ಆದೇಶ’ ಮತ್ತು ಪಾಸ್ಪೋರ್ಟ್ ನಿಯಮದಲ್ಲಿ ಮಾಡಲಾದ ತಿದ್ದುಪಡಿಯನ್ನೂ ಕೇರಳ ಸರ್ಕಾರ ಪ್ರಶ್ನಿಸಿದೆ.</p>.<p>ಸಿಎಎರದ್ದುಪಡಿಸಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಇತ್ತೀಚೆಗೆ ಒಮ್ಮತದ ನಿರ್ಣಯ ಅಂಗೀಕರಿಸಲಾಗಿತ್ತು. ಅದಕ್ಕೆ ಬಿಜೆಪಿಯಿಂದ ಎದುರಾದ ವಿರೋಧವನ್ನೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಮರ್ಥಿಸಿಕೊಂಡಿದ್ದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/kerala-assembly-passes-resolution-against-caa-694705.html" target="_blank">ಸಿಎಎ ರದ್ದತಿಗೆ ನಿರ್ಣಯ: ಕೇರಳ ವಿಧಾನಸಭೆಯಲ್ಲಿ ಮೂಡಿದ ಒಮ್ಮತ</a></p>.<p><a href="https://www.prajavani.net/stories/national/kerala-cm-pinarayi-vijayan-on-resolution-against-caa-state-assemblies-have-their-own-privileges-694814.html" target="_blank">ವಿಧಾನಸಭೆಗಳಿಗೆ ವಿಶೇಷ ಹಕ್ಕಿದೆ: ಸಿಎಎ ವಿರುದ್ಧದ ನಿರ್ಣಯ ಸಮರ್ಥಿಸಿದ ಕೇರಳ ಸಿಎಂ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಕಾಯ್ದೆ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್ಗೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಸಿಎಎ ಪ್ರಶ್ನಿಸಿ ರಾಜ್ಯ ಸರ್ಕಾರವೊಂದು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿರುವುದು ಇದೇ ಮೊದಲು.</p>.<p>ಸಮಾನತೆಯ ಹಕ್ಕು ಸೇರಿದಂತೆ ಸಂವಿಧಾನದಲ್ಲಿರುವ ಅನೇಕ ಅಂಶಗಳನ್ನು ಸಿಎಎಯಲ್ಲಿ ಉಲ್ಲಂಘಿಸಲಾಗಿದೆ. ಈ ಕಾಯ್ದೆಯು ಸಂವಿಧಾನದ ಮೂಲತತ್ವವಾದ ಜಾತ್ಯತೀತತೆಗೆ ವಿರುದ್ಧವಾದದ್ದು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.</p>.<p>ಸಂವಿಧಾನದ ವಿಧಿ 14, 21 ಮತ್ತು 25 ಅನ್ನು ಸಿಎಎಯಲ್ಲಿ ಉಲ್ಲಂಘಿಸಲಾಗಿದೆ ಎಂದೂ ಕೇರಳ ಸರ್ಕಾರ ಹೇಳಿದೆ.</p>.<p>2015ರ ಮೊದಲು ಪಾಕಿಸ್ತಾನ, ಆಫ್ಗಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಭಾರತಕ್ಕೆ ಬಂದ ಮುಸ್ಲಿಮೇತರ ವಲಸಿಗರ ವಾಸವನ್ನು ಕ್ರಮಬದ್ಧಗೊಳಿಸುವುದಕ್ಕೆ ಸಂಬಂಧಿಸಿದ ‘ವಿದೇಶಿಗರ ತಿದ್ದುಪಡಿ ಆದೇಶ’ ಮತ್ತು ಪಾಸ್ಪೋರ್ಟ್ ನಿಯಮದಲ್ಲಿ ಮಾಡಲಾದ ತಿದ್ದುಪಡಿಯನ್ನೂ ಕೇರಳ ಸರ್ಕಾರ ಪ್ರಶ್ನಿಸಿದೆ.</p>.<p>ಸಿಎಎರದ್ದುಪಡಿಸಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಇತ್ತೀಚೆಗೆ ಒಮ್ಮತದ ನಿರ್ಣಯ ಅಂಗೀಕರಿಸಲಾಗಿತ್ತು. ಅದಕ್ಕೆ ಬಿಜೆಪಿಯಿಂದ ಎದುರಾದ ವಿರೋಧವನ್ನೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಮರ್ಥಿಸಿಕೊಂಡಿದ್ದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/kerala-assembly-passes-resolution-against-caa-694705.html" target="_blank">ಸಿಎಎ ರದ್ದತಿಗೆ ನಿರ್ಣಯ: ಕೇರಳ ವಿಧಾನಸಭೆಯಲ್ಲಿ ಮೂಡಿದ ಒಮ್ಮತ</a></p>.<p><a href="https://www.prajavani.net/stories/national/kerala-cm-pinarayi-vijayan-on-resolution-against-caa-state-assemblies-have-their-own-privileges-694814.html" target="_blank">ವಿಧಾನಸಭೆಗಳಿಗೆ ವಿಶೇಷ ಹಕ್ಕಿದೆ: ಸಿಎಎ ವಿರುದ್ಧದ ನಿರ್ಣಯ ಸಮರ್ಥಿಸಿದ ಕೇರಳ ಸಿಎಂ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>