ಆದರೆ, ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ಲಾಮಿಕ್ ಸಂಘಟನೆಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಹಿಂದುತ್ವದ ಫ್ಯಾಸಿಸಂ ವಿರುದ್ಧ ಸಮಾಜದ ಎಲ್ಲ ವರ್ಗಗಳ ಏಕತೆ ಬೆಳೆಯುತ್ತಿರುವ ಈ ಹಂತದಲ್ಲಿ ಇಂತಹಾ ಆರೋಪಗಳು ವಿಭಜನೆಗೆ ಕಾರಣವಾಗಬಹುದು. ಚರ್ಚ್ ತನ್ನ ಹೇಳಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಆದರೆ, ವಿಶ್ವ ಹಿಂದು ಪರಿಷತ್ ಚರ್ಚ್ ಹೇಳಿಕೆಯನ್ನು ಸ್ವಾಗತಿಸಿದ್ದು, ಕೇರಳದಲ್ಲಿ ಲವ್ ಜಿಹಾದ್ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದೆ.