ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆಗಳಿಗೆ ವಿಶೇಷ ಹಕ್ಕಿದೆ: ಸಿಎಎ ವಿರುದ್ಧದ ನಿರ್ಣಯ ಸಮರ್ಥಿಸಿದ ಕೇರಳ ಸಿಎಂ

ಬಿಜೆಪಿ ಟೀಕೆಗೆ ಪಿಣರಾಯಿ ವಿಜಯನ್ ಪ್ರತಿಕ್ರಿಯೆ
Last Updated 1 ಜನವರಿ 2020, 12:07 IST
ಅಕ್ಷರ ಗಾತ್ರ

ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ವಿಧಾನಸಭೆಗಳಿಗೆ ವಿಶೇಷ ಹಕ್ಕುಗಳಿವೆ ಎಂದು ಬಿಜೆಪಿ ಟೀಕೆಗೆ ಉತ್ತರಿಸಿದ್ದಾರೆ.

ನಿರ್ಣಯ ಅಂಗೀಕರಿಸಿದ್ದನ್ನು ಟೀಕಿಸಿದ್ದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ‘ವಿಜಯನ್ ಅವರು ಸೂಕ್ತ ಕಾನೂನು ಸಲಹೆ ಪಡೆಯಬೇಕು. ಪೌರತ್ವಕ್ಕೆ ಸಂಬಂಧಿಸಿ ಯಾವುದೇ ಕಾನೂನು ಜಾರಿಗೊಳಿಸಲು ಅಧಿಕಾರ ಇರುವುದು ಸಂಸತ್ತಿಗೆ ಮಾತ್ರ. ವಿಧಾನಸಭೆಗಳಿಗೆ ಅಲ್ಲ’ ಎಂದು ಹೇಳಿದ್ದರು.

ಬಿಜೆಪಿ ರಾಜ್ಯಸಭಾ ಸದಸ್ಯ ಜಿ.ವಿ.ಎಲ್ ನರಸಿಂಹ ರಾವ್ ಅವರು ರಾಜ್ಯಸಭೆಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದು, ‘ಸಂಸತ್ತಿನ ಹಕ್ಕುಗಳು ಹಾಗೂ ಕಲಾಪಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೇರಳ ಮುಖ್ಯಮಂತ್ರಿ ವಿರುದ್ಧ ವಿಚಾರಣೆ ಆರಂಭಿಸಬೇಕು’ ಎಂದು ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ವಿಜಯನ್, ‘ಇಂತಹ ವಿಚಾರಣೆ ಕುರಿತು ಕೇಳಿರಲಿಲ್ಲ. ಆದರೆ ಇಂತಹ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಏಕೆಂದರೆ ದೇಶದಲ್ಲಿ ಹಿಂದೆಂದೂ ನಡೆಯದಂತಹ ಬೆಳವಣಿಗೆಗಳು ಈಗ ಆಗುತ್ತಿವೆ’ ಎಂದಿದ್ದಾರೆ.

‘ಸಂವಿಧಾನದ ಮೂಲತತ್ವಗಳನ್ನು ಉಲ್ಲಂಘಿಸಿದ ಕಾನೂನಿನ ವಿರುದ್ಧ ನಿರ್ಣಯ ಮಂಡಿಸಿದ ಮೊದಲ ರಾಜ್ಯ ಕೇರಳ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT