ಆರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದ್ದು, ಸಿಪಿಎಂ ನೇತೃತ್ವದ ಎಲ್ಡಿಎಫ್ನತ್ತ ಐವರು ಶಾಸಕರನ್ನು ಹೊಂದಿರುವ ಕೇರಳ ಕಾಂಗ್ರೆಸ್(ಎಂ) ಪಕ್ಷ ಒಲವು ತೋರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಿಕ್ಕಟ್ಟು ಪರಿಹಾರಕ್ಕೆ ಕಾಂಗ್ರೆಸ್ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಪಕ್ಷದ ಅಧ್ಯಕ್ಷರಾಗಿದ್ದ ಕೆ. ಎಂ.ಮಾಣಿ ಅವರು ಏಪ್ರಿಲ್ನಲ್ಲಿ ನಿಧನರಾದ ಬಳಿಕ ಪಕ್ಷದಲ್ಲಿ ಭಿನ್ನಮತ ತಲೆದೋರಿತ್ತು.