ಔಷಧಿ ಅಂಗಡಿಗಳು, ಹಾಲು, ವೈದ್ಯಕೀಯ ಸೇವೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ಆದೇಶ ಅನ್ವಯವಾಗುವುದಿಲ್ಲ.
ಕಾರಗೋಡಿನಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. ಅಲ್ಲದೆ, ಹಕ್ಕಿ ಜ್ವರವೂ ಕಾಣಿಸಿಕೊಂಡು ಈ ಜಿಲ್ಲೆಯ ಜನರು ತೀವ್ರ ಆತಂಕಗೊಂಡಿದ್ದಾರೆ. ಇದರಿಂದಾಗಿ ರೋಗ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.