ತಿರುವನಂತಪುರ: ರೈತರ ಆತ್ಮಹತ್ಯೆ ತಡೆಯಲು ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿದ ಮನವಿಗೆ ಕೇರಳ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಎರಡು ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಹಾಗೂ ಸಹಕಾರ ಬ್ಯಾಂಕ್ಗಳು ಸಾಲ ವಸೂಲಾತಿ ಕ್ರಮಕ್ಕೂ ಸದ್ಯಕ್ಕೆ ತಡೆಯೊಡ್ಡಲು ಕ್ರಮವಹಿಸಲಾಗುವುದು ಎಂದು ಕೇರಳ ಸರ್ಕಾರ ಭರವಸೆ ನೀಡಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ವಿಧಾನಸಭೆಯಲ್ಲಿ ಈ ವಿಷಯ ಪ್ರಕಟಿಸಿದರು.ಕೇರಳ ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಸೋಮವಾರ ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿತು. ಈ ಕುರಿತು ನಿಲುವಳಿ ಸೂಚನೆಯನ್ನು ಮಂಡಿಸಲು ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಸಭಾತ್ಯಾಗವನ್ನು ಮಾಡಿತು.