ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ ಬೋಧಿಸಿದರೆ ಶಾಲೆ ಮುಚ್ಚಿಸಿ: ಕೇರಳ ಹೈಕೋರ್ಟ್‌

Last Updated 25 ಜನವರಿ 2020, 19:42 IST
ಅಕ್ಷರ ಗಾತ್ರ

ಕೊಚ್ಚಿ: ರಾಜ್ಯದ ಮಾನ್ಯತೆ ಪಡೆದ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದೆ ಧಾರ್ಮಿಕ ಬೋಧನೆ ನಡೆಸುವಂತಿಲ್ಲ ಹಾಗೂಧಾರ್ಮಿಕ ಸೂಚನೆ ನೀಡುವಂತಿಲ್ಲ ಎಂದು ಶುಕ್ರವಾರ ಕೇರಳ ಹೈಕೋರ್ಟ್‌ ತೀರ್ಪು ನೀಡಿದೆ. ಈ ಕುರಿತು ಆದೇಶ ಹೊರಡಿಸುವಂತೆಯೂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಆದೇಶ ಉಲ್ಲಂಘಿಸುವ ಶಾಲೆಗಳ ಮಾನ್ಯತೆ ರದ್ದುಪಡಿಸಿ, ಮುಚ್ಚಿಸಬೇಕು ಎಂದು ನ್ಯಾಯಮೂರ್ತಿ ಎ. ಮುಹಮ್ಮದ್‌ ಮುಷ್ತಾಕ್‌ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ನಿರ್ದಿಷ್ಟ ಸಮುದಾಯ ವಿದ್ಯಾರ್ಥಿಗಳಿಗೆ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡುತ್ತಿದ್ದ ಶಾಲೆಯನ್ನು ಮುಚ್ಚಿಸಲು ಮುಂದಾಗಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಮೂರ್ತಿ ತೀರ್ಪು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT