ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಯಾಗಿ ಬುಧವಾರ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣ ವಚನ

Last Updated 19 ಮೇ 2018, 16:54 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲ್ಲಿದ್ದಾರೆ.

ಸೋಮವಾರ ರಾಜೀವ್ ಗಾಂಧಿ ಪುಣ್ಯತಿಥಿ ಇರುವುದರಿಂದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾಗಾಂಧಿ ರಾಜ್ಯಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ಮಂಗಳವಾರ ಶುಭವಲ್ಲ ಎನ್ನುವ ಕಾರಣಕ್ಕೆ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಮಾಯಾವತಿ, ಅಖಿಲೇಶ್‌ ಯಾದವ್‌, ಚಂದ್ರಬಾಬು ನಾಯ್ಡು ಸೇರಿ ವಿವಿಧ ರಾಜ್ಯಗಳ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT