ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ತುಳಸಿಗೆ ನಿರೀಕ್ಷಣಾ ಜಾಮೀನಿಲ್ಲ

Last Updated 10 ಜನವರಿ 2019, 19:55 IST
ಅಕ್ಷರ ಗಾತ್ರ

ಕೊಚ್ಚಿ: ಮಲಯಾಳಂ ನಟ ಕೊಲ್ಲಂ ತುಳಸಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಗುರುವಾರ ತಳ್ಳಿಹಾಕಿದೆ.

ಶಬರಿಮಲೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ, ಕೊಲ್ಲಂ ಅವರು ಮಹಿಳೆಯರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಅವರಿಗೆ ನ್ಯಾಯಮೂರ್ತಿ ರಾಜ ವಿಜಯವರ್ಧನ ನಿರ್ದೇಶನ ನೀಡಿದರು.

ಕೊಲ್ಲಂನ ಸೆಷನ್ಸ್‌ ಕೋರ್ಟ್‌ ಜಾಮೀನು ನಿರಾಕರಿಸಿದ ನಂತರ ಹೈಕೋರ್ಟ್‌ನಲ್ಲಿ ಕೊಲ್ಲಂ ಅರ್ಜಿ ಸಲ್ಲಿಸಿದ್ದರು.

‘ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅರ್ಧರ್ಧ ಸೀಳಿ ಹಾಕಬೇಕು.ಅದರಲ್ಲಿ ಅರ್ಧ ಭಾಗವನ್ನು ದೆಹಲಿಗೆ ಕಳುಹಿಸಿ, ಇನ್ನರ್ಧ ಭಾಗವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಕಚೇರಿಯತ್ತ ಎಸೆಯಬೇಕು ಎಂದು ಅವರು ಕೆಲ ದಿನಗಳ ಹಿಂದೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT