<p><strong>ತಿರುವನಂತಪುರ</strong>: ಐಎಎಸ್ ಅಧಿಕಾರಿ ಚಲಾಯಿಸುತ್ತಿದ್ದ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಪತ್ರಕರ್ತ ಕೆ.ಎಂ. ಬಷೀರ್ (35)ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಇಲ್ಲಿನ ಮ್ಯೂಸಿಯಂ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ಅಪಘಾತ ನಡೆದಿದ್ದು, ಈ ಸಂಬಂಧ ಐಎಎಸ್ ಅಧಿಕಾರಿ ಡಾ. ಶ್ರೀರಾಮ್ ವೆಂಕಟರಾಮನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮ್ ಅವರನ್ನು ಸರ್ಕಾರ ಈಚೆಗೆ ಸರ್ವೆ ಇಲಾಖೆಯ ನಿರ್ದೇಕರನ್ನಾಗಿ ನೇಮಕ ಮಾಡಿತ್ತು. ಮಲಪ್ಪುರಂ ಜಿಲ್ಲೆಯ ನಿವಾಸಿ ಬಷೀರ್ ಅವರು ’ಸಿರಾಜ್‘ ದಿನಪತ್ರಿಕೆಯ ಬ್ಯೂರೊ ಮುಖ್ಯಸ್ಥರಾಗಿದ್ದರು.</p>.<p>ಅಪಘಾತ ನಡೆದ ಸಂದರ್ಭದಲ್ಲಿ ಜೊತೆಗಿದ್ದ ಅನಿವಾಸಿ ಭಾರತೀಯ ಉದ್ಯಮಿ ಮಹಿಳೆ ವಹಾ ಫಿರೋಜ್ ಕಾರು ಚಲಾಯಿಸುತ್ತಿದ್ದರು ಎಂದು ಶ್ರೀರಾಮ್ ತಿಳಿಸಿದ್ದರು.</p>.<p>ಶ್ರೀರಾಮ್ ಅವರೇ ಕಾರು ಚಲಾಯಿಸುತ್ತಿದ್ದರು ಎಂದು ಪೊಲೀಸರು ವಿಚಾರಣೆ ನಡೆಸಿದಾಗ ವಹಾ ಒಪ್ಪಿಕೊಂಡಿದ್ದಾರೆ.</p>.<p>‘ಯಾರು ಕಾರು ಚಲಾಯಿಸಿದ್ದರು ಎಂಬುದರ ಬಗ್ಗೆ ಆರಂಭದಲ್ಲಿ ಗೊಂದಲವಿತ್ತು. ಸ್ಥಳೀಯರಿಂದ ಮಾಹಿತಿ ಪಡೆದ ಬಳಿಕ ಶ್ರೀರಾಮ್ ಅವರೇ ಕಾರು ಚಲಾಯಿಸುತ್ತಿದ್ದರು ಎಂಬುದು ದೃಢಪಟ್ಟಿದೆ‘ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.</p>.<p>ಶ್ರೀರಾಮ್ ಅವರ ರಕ್ತದ ಮಾದರಿಯನ್ನು ತಪಾಸಣೆ ನಡೆಸಿದಾಗ ರಕ್ತದಲ್ಲಿ ಆಲ್ಕೋಹಾಲ್ ಅಂಶ ಇರುವುದು ದೃಢಪಟ್ಟಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಐಎಎಸ್ ಅಧಿಕಾರಿ ಚಲಾಯಿಸುತ್ತಿದ್ದ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಪತ್ರಕರ್ತ ಕೆ.ಎಂ. ಬಷೀರ್ (35)ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಇಲ್ಲಿನ ಮ್ಯೂಸಿಯಂ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ಅಪಘಾತ ನಡೆದಿದ್ದು, ಈ ಸಂಬಂಧ ಐಎಎಸ್ ಅಧಿಕಾರಿ ಡಾ. ಶ್ರೀರಾಮ್ ವೆಂಕಟರಾಮನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮ್ ಅವರನ್ನು ಸರ್ಕಾರ ಈಚೆಗೆ ಸರ್ವೆ ಇಲಾಖೆಯ ನಿರ್ದೇಕರನ್ನಾಗಿ ನೇಮಕ ಮಾಡಿತ್ತು. ಮಲಪ್ಪುರಂ ಜಿಲ್ಲೆಯ ನಿವಾಸಿ ಬಷೀರ್ ಅವರು ’ಸಿರಾಜ್‘ ದಿನಪತ್ರಿಕೆಯ ಬ್ಯೂರೊ ಮುಖ್ಯಸ್ಥರಾಗಿದ್ದರು.</p>.<p>ಅಪಘಾತ ನಡೆದ ಸಂದರ್ಭದಲ್ಲಿ ಜೊತೆಗಿದ್ದ ಅನಿವಾಸಿ ಭಾರತೀಯ ಉದ್ಯಮಿ ಮಹಿಳೆ ವಹಾ ಫಿರೋಜ್ ಕಾರು ಚಲಾಯಿಸುತ್ತಿದ್ದರು ಎಂದು ಶ್ರೀರಾಮ್ ತಿಳಿಸಿದ್ದರು.</p>.<p>ಶ್ರೀರಾಮ್ ಅವರೇ ಕಾರು ಚಲಾಯಿಸುತ್ತಿದ್ದರು ಎಂದು ಪೊಲೀಸರು ವಿಚಾರಣೆ ನಡೆಸಿದಾಗ ವಹಾ ಒಪ್ಪಿಕೊಂಡಿದ್ದಾರೆ.</p>.<p>‘ಯಾರು ಕಾರು ಚಲಾಯಿಸಿದ್ದರು ಎಂಬುದರ ಬಗ್ಗೆ ಆರಂಭದಲ್ಲಿ ಗೊಂದಲವಿತ್ತು. ಸ್ಥಳೀಯರಿಂದ ಮಾಹಿತಿ ಪಡೆದ ಬಳಿಕ ಶ್ರೀರಾಮ್ ಅವರೇ ಕಾರು ಚಲಾಯಿಸುತ್ತಿದ್ದರು ಎಂಬುದು ದೃಢಪಟ್ಟಿದೆ‘ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.</p>.<p>ಶ್ರೀರಾಮ್ ಅವರ ರಕ್ತದ ಮಾದರಿಯನ್ನು ತಪಾಸಣೆ ನಡೆಸಿದಾಗ ರಕ್ತದಲ್ಲಿ ಆಲ್ಕೋಹಾಲ್ ಅಂಶ ಇರುವುದು ದೃಢಪಟ್ಟಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>