ಪ್ರಕರಣ ಇತ್ಯರ್ಥವಾಗದ ಕಾರಣ ಈ ಸಮಸ್ಯೆ ಸುಪ್ರೀಂ ಕೋರ್ಟ್ ತಲುಪಿತ್ತು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಆರೋಗ್ಯ ಮತ್ತು ಕುಟುಂಬಗಳಇಲಾಖೆಯ ಕಾರ್ಯದರ್ಶಿ ಕೂಡಲೆ ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕು. ಅಲ್ಲದೆ, ಕೇರಳದಿಂದ ಬರುವ ಕೊರೊನಾ ಸೋಂಕಿತರು ಕರ್ನಾಟಕದಲ್ಲಿ ಚಿಕಿತ್ಸೆ ಪಡೆಯಲು ಸುಲಭವಾಗಿಸುವಂತೆ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದೆ.