ಸೋಂಕು ಪೀಡಿತ ವ್ಯಕ್ತಿ ಪಾಲಕ್ಕಾಡ್ ಸಮೀಪದ ಕರಕ್ಕುರುಸ್ಸಿಯವರಾಗಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ, ಇವರು ಮಸೀದಿಯಲ್ಲಿ ಪ್ರಾರ್ಥನೆಗೂ ತೆರಳಿದ್ದರು. ಅನೇಕ ಅಂಗಡಿಗಳಿಗೆ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೂ ಭೇಟಿ ನೀಡಿದ್ದರು ಎನ್ನಲಾಗಿದೆ. ಇವರ ಬಗ್ಗೆ ಸ್ಥಳೀಯರು ಆರೋಗ್ಯ ಅಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ನೀಡಿದ್ದರು. ಬಳಿಕ ಇವರನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು.