ಮಣ್ಣಿನ ಗುಡ್ಡೆಯನ್ನು ಹಾಕಿ ಕೇರಳವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಿದ್ದಕ್ಕಾಗಿ ವಿಜಯನ್ ಅವರು ಕರ್ನಾಟಕದ ಅಧಿಕಾರಿಗಳ ಮೇಲೆ ಶುಕ್ರವಾರ ವಾಗ್ದಾಳಿ ನಡೆಸಿದ್ದರು. ಕಾಸರಗೋಡಿನ ರೋಗಿಗಳು ಸಹ ಡಯಾಲಿಸಿಸ್ಗಾಗಿ ಮಂಗಳೂರಿನ ಆಸ್ಪತ್ರೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೇರಳದ ಮುಖ್ಯ ಕಾರ್ಯದರ್ಶಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಯೊಂದಿಗೆಚರ್ಚಿಸಿದ್ದು,ಅವರು ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದರು.