ಕೋವಿಡ್ ಹಾಟ್ಸ್ಪಾಟ್ಗಳಲ್ಲದ ಆಲಪ್ಪುಳ, ತ್ರಿಶೂರ್, ಪಾಲಕ್ಕಾಡ್, ತಿರುವನಂತಪುರ, ವಯನಾಡ್ ಜಿಲ್ಲೆಗಳಲ್ಲಿ ಲಾಕ್ಡೌನ್ ಭಾಗಶಃ ತೆರವು ಹಾಗೂ ಕೊಟ್ಟಾಯಂ, ಇಡುಕ್ಕಿಯಲ್ಲಿ ಲಾಕ್ಡೌನ್ ನಿಯಮಗಳನ್ನು ಏಪ್ರಿಲ್ 20ರಿಂದ ಬಹುತೇಕ ತೆರವುಗೊಳಿಸುವ ಬಗ್ಗೆ ಕೇರಳ ಸರ್ಕಾರ ಏಪ್ರಿಲ್ 17ರಂದು ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಈ ಮಾರ್ಗಸೂಚಿಯಲ್ಲಿ ಹೋಟೆಲ್, ರೆಸ್ಟೋರೆಂಟ್, ಪುರಸಭೆ ವ್ಯಾಪ್ತಿಯಲ್ಲಿನ ಬಸ್ ಸಂಚಾರ, ಸಮ–ಬೆಸ ವಾಹನ ಸಂಚಾರ, ಕಟ್ಟಡ ಕಾರ್ಮಿಕರು, ಕ್ಷೌರದಂಗಡಿ, ಪುಸ್ತಕದಂಗಡಿಗಳಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡಿತ್ತು.