ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅ.23 ರಂದು ಹೊರಡಿಸಿದ ಆದೇಶವು ಪ್ರಧಾನಮಂತ್ರಿ, ಲೋಕಸಭೆ ಪ್ರತಿಕ್ಷದ ನಾಯಕ ಹಾಗೂ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡಿರುವ ಉನ್ನತಾಧಿಕಾರ ಸಮಿತಿಯ ಒಪ್ಪಿಗೆ ಪಡೆದಿಲ್ಲ. ಈ ಆದೇಶವು ಸಂಪೂರ್ಣ ಕಾನೂನುಬಾಹಿರ, ಸ್ವೇಚ್ಛಾನುಸಾರ ಮತ್ತು ಪ್ರತಿಕಾರದಿಂದ ಕೂಡಿದೆ ಎಂದು ಅವರು ಆರೋಪಿಸಿದ್ದಾರೆ.