ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿಯಲ್ಲಿ ಯಾಕೆ ಪ್ರಮಾಣ ವಚನ ಸ್ವೀಕರಿಸಿದಿರಿ? ಕೇರಳದ ಸಂಸದರನ್ನು ಗದರಿದ ಸೋನಿಯಾ

Last Updated 17 ಜೂನ್ 2019, 14:29 IST
ಅಕ್ಷರ ಗಾತ್ರ

ನವದೆಹಲಿ:17ನೇ ಲೋಕಸಭೆಯ ಅಧಿವೇಶನವು ಸಂಸದರ ಪ್ರಮಾಣ ವಚನ ಸ್ವೀಕಾರದೊಂದಿಗೆ ಸೋಮವಾರ ಅಧಿಕೃತವಾಗಿ ಆರಂಭವಾಗಿದೆ. ಈ ವೇಳೆ ಕೇರಳದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನು ಬಿಜೆಪಿ ಸಂಸದರು ಡೆಸ್ಕ್‌ಗೆಕುಟ್ಟುತ್ತಾಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಂತರ ಸುರೇಶ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.

ಆದರೆ ಹಿಂದಿಯಲ್ಲಿ ಯಾಕೆ ಪ್ರಮಾಣ ವಚನ ಸ್ನೀಕರಿಸಿದಿರಿ? ನಿಮ್ಮ ಮಾತೃಭಾಷೆಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸಬೇಕಿತ್ತು ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸುನಿಲ್ ಅವರನ್ನು ಗದರಿದ್ದಾರೆ.

ಇದಾದನಂತರ ಕೇರಳದ ಕಾಂಗ್ರೆಸ್ ಸಂಸದರಾದ ರಾಜಮೋಹನ್ ಉಣ್ಣಿತ್ತಾನ್ಮತ್ತು ವಿ.ಕೆ. ಶ್ರೀಕಂಠನ್ ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸುವ ನಿರ್ಧಾರದಿಂದ ಹಿಂದೆ ಸರಿದರು ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT