<p><strong>ಬೆಂಗಳೂರು: </strong>ವರ್ತೂರು ಸೇತುವೆ ಹಾಳಾಗಿದ್ದು, ವಾಹನಗಳ ಸವಾರರಿಗೆ ಅಲುಗಾಡಿದ ಅನುಭವವಾಗುತ್ತಿದೆ. ಹೀಗಾಗಿ,ಸೇತುವೆಯಲ್ಲಿ ಭಾರೀ ಗಾತ್ರದ ವಾಹನಗಳ (ಎಚ್ಎಂವಿ) ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.</p>.<p>ಹಲವು ದಿನಗಳಿಂದ ಸೇತುವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತಿವೆ. ಇತ್ತೀಚೆಗೆ ಸವಾರರು ಸಂಚರಿಸುತ್ತಿದ್ದ ವೇಳೆ ಸೇತುವೆ ಅಲುಗಾಡಿದ ಅನುಭವವಾಗಿತ್ತು. ಆ ಬಗ್ಗೆ ಅವರು, ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಅವರ ಪೋಸ್ಟ್ನ್ನು ಹಲವರು ಶೇರ್ ಮಾಡಿದ್ದರು. ಅದೇ ವಿಷಯವನ್ನು ಕೈಗೆತ್ತಿಕೊಂಡಿದ್ದ ವೈಟ್ಫೀಲ್ಡ್ ರೈಸಿಂಗ್ ಸಂಘಟನೆಯು ಹೋರಾಟ ಶುರು ಮಾಡಿತ್ತು.</p>.<p>ಅದಕ್ಕೆ ಸ್ಪಂದಿಸಿದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಸೇತುವೆ ಇರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಇತ್ತೀಚೆಗೆ ಸುರಿದ ಮಳೆ ಹಾಗೂ ನಿರಂತರವಾಗಿ ವಾಹನಗಳ ಓಡಾಟದಿಂದ ಸೇತುವೆಗೆ ಹಾನಿ ಆಗಿದೆ’ ಎಂದು ವೈಟ್ಫೀಲ್ಡ್ ರೈಸಿಂಗ್ ಸಂಘಟನೆಯ ಸದಸ್ಯರೊಬ್ಬರು ತಿಳಿಸಿದರು.</p>.<p>ಶಾಸಕ ಲಿಂಬಾವಳಿ, ‘ಸೇತುವೆ ಪರಿಶೀಲಿಸಿ ವರದಿ ನೀಡುವಂತೆ ಹಿರಿಯ ಎಂಜಿನಿಯರ್ಗೆ ಹೇಳಿದ್ದೇನೆ’ ಎಂದು ಹೇಳಿದರು.</p>.<p>ವೈಟ್ಫೀಲ್ಡ್ ಸಂಚಾರ ಪೊಲೀಸರು, ‘ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿದ್ದೇವೆ. ಅಗತ್ಯಬಿದ್ದರೆ, ಎಲ್ಲ ವಾಹನಗಳ ಸಂಚಾರವನ್ನು ನಿರ್ಬಂಧಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವರ್ತೂರು ಸೇತುವೆ ಹಾಳಾಗಿದ್ದು, ವಾಹನಗಳ ಸವಾರರಿಗೆ ಅಲುಗಾಡಿದ ಅನುಭವವಾಗುತ್ತಿದೆ. ಹೀಗಾಗಿ,ಸೇತುವೆಯಲ್ಲಿ ಭಾರೀ ಗಾತ್ರದ ವಾಹನಗಳ (ಎಚ್ಎಂವಿ) ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.</p>.<p>ಹಲವು ದಿನಗಳಿಂದ ಸೇತುವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತಿವೆ. ಇತ್ತೀಚೆಗೆ ಸವಾರರು ಸಂಚರಿಸುತ್ತಿದ್ದ ವೇಳೆ ಸೇತುವೆ ಅಲುಗಾಡಿದ ಅನುಭವವಾಗಿತ್ತು. ಆ ಬಗ್ಗೆ ಅವರು, ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಅವರ ಪೋಸ್ಟ್ನ್ನು ಹಲವರು ಶೇರ್ ಮಾಡಿದ್ದರು. ಅದೇ ವಿಷಯವನ್ನು ಕೈಗೆತ್ತಿಕೊಂಡಿದ್ದ ವೈಟ್ಫೀಲ್ಡ್ ರೈಸಿಂಗ್ ಸಂಘಟನೆಯು ಹೋರಾಟ ಶುರು ಮಾಡಿತ್ತು.</p>.<p>ಅದಕ್ಕೆ ಸ್ಪಂದಿಸಿದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಸೇತುವೆ ಇರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಇತ್ತೀಚೆಗೆ ಸುರಿದ ಮಳೆ ಹಾಗೂ ನಿರಂತರವಾಗಿ ವಾಹನಗಳ ಓಡಾಟದಿಂದ ಸೇತುವೆಗೆ ಹಾನಿ ಆಗಿದೆ’ ಎಂದು ವೈಟ್ಫೀಲ್ಡ್ ರೈಸಿಂಗ್ ಸಂಘಟನೆಯ ಸದಸ್ಯರೊಬ್ಬರು ತಿಳಿಸಿದರು.</p>.<p>ಶಾಸಕ ಲಿಂಬಾವಳಿ, ‘ಸೇತುವೆ ಪರಿಶೀಲಿಸಿ ವರದಿ ನೀಡುವಂತೆ ಹಿರಿಯ ಎಂಜಿನಿಯರ್ಗೆ ಹೇಳಿದ್ದೇನೆ’ ಎಂದು ಹೇಳಿದರು.</p>.<p>ವೈಟ್ಫೀಲ್ಡ್ ಸಂಚಾರ ಪೊಲೀಸರು, ‘ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿದ್ದೇವೆ. ಅಗತ್ಯಬಿದ್ದರೆ, ಎಲ್ಲ ವಾಹನಗಳ ಸಂಚಾರವನ್ನು ನಿರ್ಬಂಧಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>