ಕೇಂದ್ರ ಕಚೇರಿಯಲ್ಲಿರುವ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು,ರೆಸಾರ್ಟ್ ನಲ್ಲಿರುವ ಶಾಸಕರು ನಮ್ಮ ಪಕ್ಷದವರು. ಅಲ್ಲಿರುವ ಕೆಲ ಬಿಜೆಪಿ ಶಾಸಕರು ಅವರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ. ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡ ಹಾಗೂ ಇತರರೂ ಇದ್ದರು.