ಶುಕ್ರವಾರ ಪಕ್ಷದ ಮುಖಂಡ ಅಹಮದ್ ಪಟೇಲ್ ಅವರೊಂದಿಗೆ ಚರ್ಚಿಸಿ, ಎರಡು ಸ್ಥಾನಗಳಲ್ಲಿ ಒಂದು ಸ್ಥಾನ ನೀಡುವಂತೆ ಮನವಿ ಸಲ್ಲಿಸಿರುವ ಅವರು, ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ನೀರಸ ಫಲಿತಾಂಶದ ಕಾರಣ ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬದಲಿಸುವ ಸಾಧ್ಯತೆ ಇರುವುದರಿಂದ ಆ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾದರೂ ತಮ್ಮ ಹೆಸರನ್ನು ಪರಿಗಣಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಮೂಲಗಳು ಹೇಳಿವೆ.