ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದಿನೇಶ್ ರಾವ್, ‘ಈಗಾಗಲೇ ಕೆಪಿಎಸ್ಸಿ ಕಳುಹಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯು, ಸರ್ಕಾರದ ಪರಿಶೀಲನೆಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನಷ್ಟು ಕಾಲಾವಕಾಶ ಬೇಕು. ಅಂತೆಯೇ, ಈ ಕುರಿತ ನ್ಯಾಯಾಂಗ ನಿಂದನೆ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ಇದೇ 5ರಂದು ವಿಚಾರಣೆಗೆ ಬರಲಿದೆ’ ಎಂದು ವಿವರಿಸಿದರು.