‘ಆ ಎರಡೂ ರಾಜ್ಯಗಳು ಹಾಗೂ ಕಣಿವೆ ವ್ಯಾಪ್ತಿಯ ಮಹಾರಾಷ್ಟ್ರದ ಕಾನೂನು ತಂಡಗಳು ಪ್ರಕರಣ ಕುರಿತು ಸಮರ್ಥ ವಾದ ಮಂಡನೆಗೆ ಸಕಲ ಸಿದ್ಧತೆ ನಡೆಸಿವೆ. ಆದರೆ, ರಾಜ್ಯ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ರೀತಿಯ ಸಭೆ ನಡೆಸಿಲ್ಲ. ಒಂದು ವರ್ಷದಿಂದ ರಾಜ್ಯ ಸರ್ಕಾರ ಸಂಪರ್ಕಿಸಿಲ್ಲ’ ಎಂದು ಕಾನೂನು ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.