<p><strong>ಹೈದರಾಬಾದ್: </strong>ಆಂಧ್ರ ಪ್ರದೇಶ ಸಂಸದ ಡಾ. ಸಂಜೀವ್ ಕುಮಾರ್ ಅವರ ಕುಟುಂಬದ ಆರು ಜನರಿಗೆ ಕೋವಿಡ್–19 ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಅವರ 80 ವರ್ಷ ವಯಸ್ಸಿನ ತಂದೆ, ಹೆಂಡತಿ, ಇಬ್ಬರು ಸಹೋದರರು ಹಾಗೂ ಇನ್ನಿಬ್ಬರು ಸೋಂಕಿತರಾಗಿದ್ದಾರೆ.</p>.<p>ಇವರಿಗೆ ಸೋಂಕು ತಗುಲಿರುವುದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ.</p>.<p>ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಜೀವ್ ಕುಮಾರ್, ‘ಸೋಂಕು ದೃಢಪಟ್ಟಿರುವ ಆರು ಜನರೂ ಸ್ಥಿರವಾಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ಎಲ್ಲರಗೂ ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ನಿಯಮದಂತೆ ಪ್ರತ್ಯೇಕವಾಸದಲ್ಲಿರಲಿದ್ದಾರೆ. ನಾವೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ಕುಟುಂಬದವರಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ನಾವು ಎಲ್ಲ ಮೂಲಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದಿದ್ದಾರೆ.</p>.<p>ಸಂಜೀವ್ ಕುಮಾರ್ ಅವರು, ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಕರ್ನೂಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಕುಟುಂಬ ಕರ್ನೂಲ್ನ ನರಸಿಂಗರಾವ್ ಪೆಟಾದಲ್ಲಿ ನೆಲಸಿದೆ.</p>.<p>ಆಂಧ್ರ ಪ್ರದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ 1,097 ಕ್ಕೆ ತಲುಪಿದೆ.ಕರ್ನೂಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು (279) ವರದಿಯಾಗಿವೆ. ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ವಾಪಸ್ ಆದ ನಂತರ ಜಿಲ್ಲೆಯಲ್ಲಿ ಸೋಂಕು ಪ್ರಕಣಗಳು ಹೆಚ್ಚಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಆಂಧ್ರ ಪ್ರದೇಶ ಸಂಸದ ಡಾ. ಸಂಜೀವ್ ಕುಮಾರ್ ಅವರ ಕುಟುಂಬದ ಆರು ಜನರಿಗೆ ಕೋವಿಡ್–19 ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಅವರ 80 ವರ್ಷ ವಯಸ್ಸಿನ ತಂದೆ, ಹೆಂಡತಿ, ಇಬ್ಬರು ಸಹೋದರರು ಹಾಗೂ ಇನ್ನಿಬ್ಬರು ಸೋಂಕಿತರಾಗಿದ್ದಾರೆ.</p>.<p>ಇವರಿಗೆ ಸೋಂಕು ತಗುಲಿರುವುದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ.</p>.<p>ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಜೀವ್ ಕುಮಾರ್, ‘ಸೋಂಕು ದೃಢಪಟ್ಟಿರುವ ಆರು ಜನರೂ ಸ್ಥಿರವಾಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ಎಲ್ಲರಗೂ ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ನಿಯಮದಂತೆ ಪ್ರತ್ಯೇಕವಾಸದಲ್ಲಿರಲಿದ್ದಾರೆ. ನಾವೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ಕುಟುಂಬದವರಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ನಾವು ಎಲ್ಲ ಮೂಲಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದಿದ್ದಾರೆ.</p>.<p>ಸಂಜೀವ್ ಕುಮಾರ್ ಅವರು, ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಕರ್ನೂಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಕುಟುಂಬ ಕರ್ನೂಲ್ನ ನರಸಿಂಗರಾವ್ ಪೆಟಾದಲ್ಲಿ ನೆಲಸಿದೆ.</p>.<p>ಆಂಧ್ರ ಪ್ರದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ 1,097 ಕ್ಕೆ ತಲುಪಿದೆ.ಕರ್ನೂಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು (279) ವರದಿಯಾಗಿವೆ. ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ವಾಪಸ್ ಆದ ನಂತರ ಜಿಲ್ಲೆಯಲ್ಲಿ ಸೋಂಕು ಪ್ರಕಣಗಳು ಹೆಚ್ಚಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>