ಶಿಮ್ಲಾ: ಪೂರ್ವ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆ ಹಿನ್ನೆಲೆಯಲ್ಲಿ ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಹಿಮಾಚಲ ಪ್ರದೇಶ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸ್ಥಳೀಯ ಜನರ ಸುರಕ್ಷತೆಗಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕಿನ್ಔರ್ ಮತ್ತು ಲಹೌಲ್-ಸ್ಪಿಟಿ ಜಿಲ್ಲೆಗಳ ಪೊಲೀಸರಿಗೆ ಎಚ್ಚರಿಕೆ ಮತ್ತು ಸಲಹೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ವಕ್ತಾರ ಖುಶಾಲ್ ಶರ್ಮಾ ತಿಳಿಸಿದ್ದಾರೆ.
ಚೀನಾದ ಸೇನಾಪಡೆಗಳೊಂದಿಗೆ ಸೋಮವಾರ ರಾತ್ರಿ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.