<p><strong>ಮುಂಬೈ</strong>: ಲಡಾಖ್ ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣ ಮಾಡಿ, ಭಾರತೀಯ ಯೋಧರನ್ನು ಹತ್ಯೆಗೆ ಕಾರಣವಾಗಿರುವ ಚೀನಾಕ್ಕೆ ತಕ್ಕ ಉತ್ತರ ನೀಡುವಂತೆ ಶಿವಸೇನಾ ಬುಧವಾರ ಆಗ್ರಹಿಸಿದೆ.</p>.<p>ಗಾಲ್ವನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದಲ್ಲಿ ಭಾರತೀಯ ಸೇನೆಯ ತುಕಡಿಯೊಂದರ 20 ಯೋಧರು ಹುತಾತ್ಮರಾಗಿದ್ದಾರೆ.</p>.<p>ರಾಜ್ಯಸಭಾ ಸದಸ್ಯ ಹಾಗೂ ಶಿವಸೇನಾ ಮುಖವಾಣಿ ‘ಸಾಮ್ನಾ’ದ ಕಾರ್ಯನಿರ್ವಾಹಕ ಸಂಪಾದಕರೂ ಆಗಿರುವ ಸಂಜತ್ ರಾವುತ್, ‘ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಧೈರ್ಯವಂತರು. ನಿಮ್ಮ ನಾಯಕತ್ವದಲ್ಲಿ ದೇಶವು ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>‘ಚೀನಾಕ್ಕೆ ಯಾವಾಗ ತಕ್ಕ ಪ್ರತ್ಯುತ್ತರ ನೀಡಲಾಗುವುದು? ಈಗಿನ ಪರಿಸ್ಥಿತಿಯಲ್ಲಿ ಇಡೀ ದೇಶವೇ ಪ್ರಧಾನಿ ಜೊತೆ ನಿಂತಿದೆ. ಆದರೆ ಸತ್ಯ ಏನು ಎಂಬುದನ್ನು ತಿಳಿದುಕೊಳ್ಳಲು ದೇಶ ಬಯಸುತ್ತದೆ. ಜೈ ಹಿಂದ್’ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.</p>.<p>‘ಒಂದೇ ಒಂದು ಗುಂಡು ಹಾರದೇ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ. ನಮ್ಮವರು ಏನು ಮಾಡುತ್ತಿದ್ದರು? ಚೀನಾದ ಎಷ್ಟು ಯೋಧರು ಸತ್ತಿದ್ದಾರೆ? ಎಂದೂ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಲಡಾಖ್ ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣ ಮಾಡಿ, ಭಾರತೀಯ ಯೋಧರನ್ನು ಹತ್ಯೆಗೆ ಕಾರಣವಾಗಿರುವ ಚೀನಾಕ್ಕೆ ತಕ್ಕ ಉತ್ತರ ನೀಡುವಂತೆ ಶಿವಸೇನಾ ಬುಧವಾರ ಆಗ್ರಹಿಸಿದೆ.</p>.<p>ಗಾಲ್ವನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದಲ್ಲಿ ಭಾರತೀಯ ಸೇನೆಯ ತುಕಡಿಯೊಂದರ 20 ಯೋಧರು ಹುತಾತ್ಮರಾಗಿದ್ದಾರೆ.</p>.<p>ರಾಜ್ಯಸಭಾ ಸದಸ್ಯ ಹಾಗೂ ಶಿವಸೇನಾ ಮುಖವಾಣಿ ‘ಸಾಮ್ನಾ’ದ ಕಾರ್ಯನಿರ್ವಾಹಕ ಸಂಪಾದಕರೂ ಆಗಿರುವ ಸಂಜತ್ ರಾವುತ್, ‘ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಧೈರ್ಯವಂತರು. ನಿಮ್ಮ ನಾಯಕತ್ವದಲ್ಲಿ ದೇಶವು ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>‘ಚೀನಾಕ್ಕೆ ಯಾವಾಗ ತಕ್ಕ ಪ್ರತ್ಯುತ್ತರ ನೀಡಲಾಗುವುದು? ಈಗಿನ ಪರಿಸ್ಥಿತಿಯಲ್ಲಿ ಇಡೀ ದೇಶವೇ ಪ್ರಧಾನಿ ಜೊತೆ ನಿಂತಿದೆ. ಆದರೆ ಸತ್ಯ ಏನು ಎಂಬುದನ್ನು ತಿಳಿದುಕೊಳ್ಳಲು ದೇಶ ಬಯಸುತ್ತದೆ. ಜೈ ಹಿಂದ್’ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.</p>.<p>‘ಒಂದೇ ಒಂದು ಗುಂಡು ಹಾರದೇ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ. ನಮ್ಮವರು ಏನು ಮಾಡುತ್ತಿದ್ದರು? ಚೀನಾದ ಎಷ್ಟು ಯೋಧರು ಸತ್ತಿದ್ದಾರೆ? ಎಂದೂ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>