ಲೋಕಸಭೆಯ ಅಧಿವೇಶನದಲ್ಲಿ ಪಾಲ್ಗೊಂಡಿರುವ ಮೈಸೂರು-ಕೊಡಗು ಸಂಸದರಾದ ಪ್ರತಾಪ್ ಸಿಂಹ, ಬೆಂಗಳೂರು ದಕ್ಷಿಣದ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಡಿ.ಕೆ. ಸುರೇಶ್ ಅವರ ಜೊತೆಗೆ ಲಡಾಖ್ ಸಂಸದ ಜಮ್ಯಾಂಗ್ ಟ್ಸೆರಿಂಗ್ ನಂಗ್ಯಾಲ್ ಅವರು ಹರಟುತ್ತಾ ಕುಳಿತಿದ್ದಾರೆ. ಈ ವೇಳೆ ನಂಗ್ಯಾಲ್ ಕಾಂಗ್ರೆಸ್ ಸಂಸದರಿಗೆ 'ಬಿಜೆಪಿ ಸೇರಿಕೊಳ್ಳಿ' ಎಂದು ಕಾಲೆಳೆದಿದ್ದಾರೆ.