<p><strong>ನವದೆಹಲಿ:</strong> ಕೇಂದ್ರಾಡಳಿತ ಪ್ರದೇಶ ಲಡಾಕ್ನಲ್ಲಿ ದಿಢೀರನೆ ಕೋವಿಡ್-19 ರೋಗ ಪ್ರಕರಣಗಳು ಏರಿಕೆಯಾಗಿವೆ. ಭಾನುವಾರ 18 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕು ದೃಢಪಟ್ಟವರ ಸಂಖ್ಯೆ 24ಕ್ಕೇರಿದೆ.</p>.<p>ಚುಹೋಟ್-ಯೊಕ್ಮಾ ಪ್ರದೇಶದಲ್ಲಿ 18 ಹೊಸ ಪ್ರಕರಣಗಳು ಪತ್ತೆಯಾಗಿವೆ. ದಯವಿಟ್ಟು ಮನೆಯೊಳಗೆ ಇರಿ ಮತ್ತು ಅಂತರ ಕಾಯ್ದುಕೊಳ್ಳಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಿಗಿಜಿನ್ ಸಂಫಾಲ್ ಟ್ವೀಟಿಸಿದ್ದಾರೆ.</p>.<p>ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿರುವ ಪ್ರಕರಣಗಳ ಸಂಖ್ಯೆ 39980 ಆಗಿದೆ. ಇಲ್ಲಿಯವರಿಗೆ 1301 ಮಂದಿ ಸಾವಿಗೀಡಾಗಿದ್ದು , 10633 ಮಂದಿ ಚೇತರಿಸಿಕೊಂಡಿದ್ದಾರೆ.</p>.<p>ಸಿಆರ್ಪಿಎಫ್ನ ಹಿರಿಯ ಅಧಿಕಾರಿಯೊಬ್ಬರ ನೌಕರನಿಗೆ ಕೋವಿಡ್-19 ದೃಢಪಟ್ಟ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ಸಿಆರ್ಪಿಎಫ್ ಪ್ರಧಾನ ಕಚೇರಿಯನ್ನು ಸ್ಯಾನಿಟೈಜ್ ಮಾಡುವ ಸಲುವಾಗಿ ಮುಚ್ಚಲಾಗಿದೆ. ಕಚೇರಿ ಕಟ್ಟಡಕ್ಕೆ ಯಾರೊಬ್ಬರಿಗೂ ಪ್ರವೇಶವಿಲ್ಲ ಎಂದು ಸಿಆರ್ಪಿಎಫ್ ಹೇಳಿದೆ.</p>.<p>ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ ಅತೀ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಶನಿವಾರ ಸಾವಿನ ಸಂಖ್ಯೆ 500 ದಾಟಿದೆ. ಶನಿವಾರ ಇಲ್ಲಿ 36 ಮಂದಿ ಸಾವಿಗೀಡಾಗಿದ್ದಾರೆ. ಮುಂಬೈನಲ್ಲಿ 300ಕ್ಕಿಂತಲೂ ಹೆಚ್ಚು ಸಾವಿಗೀಡಾಗಿದ್ದು. ರಾಜ್ಯದಲ್ಲಿ ಇಲ್ಲಿವರೆಗೆ ಮೃತಪಟ್ಟವರ ಸಂಖ್ಯೆ 521 ಆಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 12,269.</p>.<p>ದೆಹಲಿ ಮತ್ತು ತ್ರಿಪುರದಲ್ಲಿ ಗಡಿ ರಕ್ಷಣಾ ಪಡೆಯ (ಬಿಎಸ್ಎಫ್) 17 ಮಂದಿಗೆ ಸೋಂಕು ದೃಢಪಟ್ಟಿಗೆ ಎಂದು ಸೇನೆಯ ವಕ್ತಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರಾಡಳಿತ ಪ್ರದೇಶ ಲಡಾಕ್ನಲ್ಲಿ ದಿಢೀರನೆ ಕೋವಿಡ್-19 ರೋಗ ಪ್ರಕರಣಗಳು ಏರಿಕೆಯಾಗಿವೆ. ಭಾನುವಾರ 18 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕು ದೃಢಪಟ್ಟವರ ಸಂಖ್ಯೆ 24ಕ್ಕೇರಿದೆ.</p>.<p>ಚುಹೋಟ್-ಯೊಕ್ಮಾ ಪ್ರದೇಶದಲ್ಲಿ 18 ಹೊಸ ಪ್ರಕರಣಗಳು ಪತ್ತೆಯಾಗಿವೆ. ದಯವಿಟ್ಟು ಮನೆಯೊಳಗೆ ಇರಿ ಮತ್ತು ಅಂತರ ಕಾಯ್ದುಕೊಳ್ಳಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಿಗಿಜಿನ್ ಸಂಫಾಲ್ ಟ್ವೀಟಿಸಿದ್ದಾರೆ.</p>.<p>ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿರುವ ಪ್ರಕರಣಗಳ ಸಂಖ್ಯೆ 39980 ಆಗಿದೆ. ಇಲ್ಲಿಯವರಿಗೆ 1301 ಮಂದಿ ಸಾವಿಗೀಡಾಗಿದ್ದು , 10633 ಮಂದಿ ಚೇತರಿಸಿಕೊಂಡಿದ್ದಾರೆ.</p>.<p>ಸಿಆರ್ಪಿಎಫ್ನ ಹಿರಿಯ ಅಧಿಕಾರಿಯೊಬ್ಬರ ನೌಕರನಿಗೆ ಕೋವಿಡ್-19 ದೃಢಪಟ್ಟ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ಸಿಆರ್ಪಿಎಫ್ ಪ್ರಧಾನ ಕಚೇರಿಯನ್ನು ಸ್ಯಾನಿಟೈಜ್ ಮಾಡುವ ಸಲುವಾಗಿ ಮುಚ್ಚಲಾಗಿದೆ. ಕಚೇರಿ ಕಟ್ಟಡಕ್ಕೆ ಯಾರೊಬ್ಬರಿಗೂ ಪ್ರವೇಶವಿಲ್ಲ ಎಂದು ಸಿಆರ್ಪಿಎಫ್ ಹೇಳಿದೆ.</p>.<p>ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ ಅತೀ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಶನಿವಾರ ಸಾವಿನ ಸಂಖ್ಯೆ 500 ದಾಟಿದೆ. ಶನಿವಾರ ಇಲ್ಲಿ 36 ಮಂದಿ ಸಾವಿಗೀಡಾಗಿದ್ದಾರೆ. ಮುಂಬೈನಲ್ಲಿ 300ಕ್ಕಿಂತಲೂ ಹೆಚ್ಚು ಸಾವಿಗೀಡಾಗಿದ್ದು. ರಾಜ್ಯದಲ್ಲಿ ಇಲ್ಲಿವರೆಗೆ ಮೃತಪಟ್ಟವರ ಸಂಖ್ಯೆ 521 ಆಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 12,269.</p>.<p>ದೆಹಲಿ ಮತ್ತು ತ್ರಿಪುರದಲ್ಲಿ ಗಡಿ ರಕ್ಷಣಾ ಪಡೆಯ (ಬಿಎಸ್ಎಫ್) 17 ಮಂದಿಗೆ ಸೋಂಕು ದೃಢಪಟ್ಟಿಗೆ ಎಂದು ಸೇನೆಯ ವಕ್ತಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>