<p><strong>ಹರಿಹರ:</strong> ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಗೋಮಾಳ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 10 ನಿವಾಸಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಸೇರಿದ್ದಾರೆ.</p>.<p>ತಹಶೀಲ್ದಾರ್ ರೆಹಾನ್ ಪಾಷಾ ನೇತೃತ್ವದಲ್ಲಿ ಮಂಗಳವಾರ ನಡೆದ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ 20 ಜನರನ್ನು ಬಂಧಿಸಲಾಗಿದೆ.</p>.<p>ಬುಳ್ಳಾಪುರ ಗ್ರಾಮದ ಗೋಮಾಳದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದ 19 ಕುಟುಂಬಗಳಿಗೆ ಸರ್ಕಾರ 2005ರಲ್ಲಿ ಹಕ್ಕುಪತ್ರ ವಿತರಿಸಿತ್ತು. ನಿವೇಶನ ಸಿಗುತ್ತದೆಂಬ ಆಸೆಯಿಂದ ಇನ್ನೂ ಕೆಲವರು ಕೆಲ ತಿಂಗಳ ಹಿಂದೆ ಗೋಮಾಳದಲ್ಲಿ 42 ತಾತ್ಕಾಲಿಕ ಮನೆಗಳನ್ನು ಕಟ್ಟಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾಡಳಿತ ಮನೆಗಳ ತೆರವಿಗೆ ನಾಲ್ಕು ದಿನಗಳ ಕಾಲಾವಕಾಶ ನೀಡಿತ್ತು.</p>.<p>ಜಿಲ್ಲಾಡಳಿತದ ಆದೇಶಕ್ಕೆ ನಿವಾಸಿಗಳು ಜಗ್ಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭ ನಿವಾಸಿಗಳು ಅಡ್ಡಿಪಡಿಸಿದ್ದಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸೂರು ಕಳೆದುಕೊಂಡವರು ಪರ್ಯಾಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಗೋಮಾಳ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 10 ನಿವಾಸಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಸೇರಿದ್ದಾರೆ.</p>.<p>ತಹಶೀಲ್ದಾರ್ ರೆಹಾನ್ ಪಾಷಾ ನೇತೃತ್ವದಲ್ಲಿ ಮಂಗಳವಾರ ನಡೆದ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ 20 ಜನರನ್ನು ಬಂಧಿಸಲಾಗಿದೆ.</p>.<p>ಬುಳ್ಳಾಪುರ ಗ್ರಾಮದ ಗೋಮಾಳದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದ 19 ಕುಟುಂಬಗಳಿಗೆ ಸರ್ಕಾರ 2005ರಲ್ಲಿ ಹಕ್ಕುಪತ್ರ ವಿತರಿಸಿತ್ತು. ನಿವೇಶನ ಸಿಗುತ್ತದೆಂಬ ಆಸೆಯಿಂದ ಇನ್ನೂ ಕೆಲವರು ಕೆಲ ತಿಂಗಳ ಹಿಂದೆ ಗೋಮಾಳದಲ್ಲಿ 42 ತಾತ್ಕಾಲಿಕ ಮನೆಗಳನ್ನು ಕಟ್ಟಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾಡಳಿತ ಮನೆಗಳ ತೆರವಿಗೆ ನಾಲ್ಕು ದಿನಗಳ ಕಾಲಾವಕಾಶ ನೀಡಿತ್ತು.</p>.<p>ಜಿಲ್ಲಾಡಳಿತದ ಆದೇಶಕ್ಕೆ ನಿವಾಸಿಗಳು ಜಗ್ಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭ ನಿವಾಸಿಗಳು ಅಡ್ಡಿಪಡಿಸಿದ್ದಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸೂರು ಕಳೆದುಕೊಂಡವರು ಪರ್ಯಾಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>