ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು 30 ಮಂದಿ ಸಾವು, ಹಲವರಿಗೆ ಗಾಯ

Last Updated 27 ಜೂನ್ 2019, 7:41 IST
ಅಕ್ಷರ ಗಾತ್ರ

ಪಾಟ್ನಾ: ಬಿಹಾರದ ವಿವಿಧೆಡೆ ಸಿಡಿಲು ಬಡಿದು 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸುಮಾರು 12 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಐಎಎನ್‌ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾಗಲ್ಪುರ, ಬೆಗುಸರಾಯ್, ಸಹಸ್ರಾ, ಪುರ್ನಿಯಾ, ಅರಾರಿಯಾ, ಕಾತಿಹಾರ್, ಜಮುಯ್, ಖಗಾರಿಯಾ, ಮಾಧೇಪುರ, ಮಧುಬನಿ, ದರ್ಭಾಂಗ, ಸಿತಾಮರ್ಹಿ, ಮಿತಿಗರಿ ಮತ್ತು ಗಯಾ ಜಿಲ್ಲೆಗಳಲ್ಲಿ ಸಿಡಿಲಿನ ಹಾವಳಿ ಹೆಚ್ಚಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿಗಳು ಹೇಳಿದ್ದಾರೆ.

ಮೃತರ ಬಂಧುಗಳಿಗೆ ರಾಜ್ಯ ಸರ್ಕಾರವು ₹4 ಲಕ್ಷ ಪರಿಹಾರ ಘೋಷಿಸಿದೆ. ಜೂನ್‌–ಸೆಪ್ಟೆಂಬರ್ ಅವಧಿಯಲ್ಲಿ ಬಿಹಾರದಲ್ಲಿ ಮುಂಗಾರು ಮಳೆ. ಈ ಅವಧಿಯಲ್ಲಿ ಸಿಡಿಲಿನ ಹಾವಳಿಯೂ ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT