ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ, ರಾಜೀವ್ ಧವನ್ ಮತ್ತು ಅಜಿತ್ ಸಿನ್ಹಾ ಅವರು ಮಸೂದೆ ಕುರಿತು ಆಕ್ಷೇಪ ಎತ್ತಿದ್ದಾರೆ. ಮೀಸಲಾತಿ ಪ್ರಮಾಣವು ಶೇ 50ಕ್ಕಿಂತ ಹೆಚ್ಚಿರಬಾರದು ಎಂದುಇಂದಿರಾ ಸಾಹ್ನಿ ಪ್ರಕರಣದಲ್ಲಿಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪು ಮಸೂದೆ ಜಾರಿಗೆ ಅಡ್ಡಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.