ವರ್ಗಾವಣೆಗೆ ಬೇಡಿಕೆಯಿಟ್ಟಿದ್ದ ಫೇಸ್ಬುಕ್ ನಿರ್ಧಾರ ವಿರೋಧಿಸುವುದನ್ನು ತಮಿಳುನಾಡು ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಕೈಬಿಟ್ಟರು. ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಬಳಕೆದಾರರ ಖಾಸಗಿತನ ಉಲ್ಲಂಘಿಸುವ ಪ್ರಶ್ನೆಯೇ ಇಲ್ಲ. ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಭೌಮತೆ ಕಾಯ್ದುಕೊಳ್ಳುವ ಯತ್ನವಿದು’ ಎಂದು ಸ್ಪಷ್ಟಪಡಿಸಿದರು.