ಪೂರಿ ಮತ್ತು ಸಬ್ಜಿಯಿದ್ದ ಪೊಟ್ಟಣದಲ್ಲಿ ಮದ್ಯವನ್ನೂ ಕಂಡ ಜನರು ತಮ್ಮ ಕಣ್ಣುಗಳನ್ನು ತಾವೇ ನಂಬಲು ಸಿದ್ಧರಿರಲಿಲ್ಲ. ಬಿಜೆಪಿ ಮುಖಂಡ ನರೇಶ್ ಅಗರ್ವಾಲ್ ಪುತ್ರ ನಿತಿನ್, ಪಾಸಿ ಸಮುದಾಯದವರಿಗಾಗಿ ಸೋಮವಾರ ಆಯೋಜಿಸಿದ್ದ ಸಮ್ಮೇಳನದಲ್ಲಿ ಈ ತಿಂಡಿ ಪೊಟ್ಟಣಗಳನ್ನು ಹಂಚಲಾಗಿದೆ. ‘ತಿಂಡಿ ಪೊಟ್ಟಣಗಳನ್ನು ಗ್ರಾಮದ ಮುಖ್ಯಸ್ಥರಿಗೆ ನೀಡಲಾಗುತ್ತಿದ್ದು, ಅವರು ಪೊಟ್ಟಣಗಳ ಹಂಚಿಕೆ ಮಾಡಲಿದ್ದಾರೆ’ ಎಂದು ನಿತಿನ್ ಅಗರ್ವಾಲ್ ವೇದಿಕೆ ಮೇಲಿಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.