ಚಳಿಗಾಲದ ಅಧಿವೇಶನದ ನಂತರ ಈ ಪ್ರಕ್ರಿಯೆ ಕೈಗೊಳ್ಳಬೇಕು. ಅಲ್ಲದೆ, ಸಂಚಾಲಕರನ್ನೂ ನೇಮಕ ಮಾಡಬೇಕೆಂದು ಒತ್ತಾಯಿಸಲಾಗಿದೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಸಮನ್ವಯ ಸಮಿತಿಯೇ ಸಂಚಾಲಕರನ್ನು ನೇಮಕ ಮಾಡಬೇಕು. ಈ ರೀತಿ ಮಾಡುವುದರಿಂದ ಮಿತ್ರಪಕ್ಷಗಳ ನಡುವೆ ಹೊಂದಾಣಿಕೆ ಇರಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಚಿರಾಗ್ ಪಾಸ್ವಾನ್ ಬಿಹಾರದ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ.