‘ಇತರೆ ರಾಷ್ಟ್ರಗಳು ಘೋಷಿಸಿರುವ ಲಾಕ್ಡೌನ್ ತಂತ್ರದ ಹೊರತಾಗಿಯೂ ಇತರೆ ಹೆಜ್ಜೆಗಳನ್ನು ತೆಗೆದುಕೊಳ್ಳಬೇಕಾಗಿದೆ. ಭಾರತದ ಸ್ಥಿತಿಯು ಇತರೆ ದೇಶಗಳಿಗಿಂತ ವಿಭಿನ್ನವಾಗಿದೆ. ಭಾರತದಲ್ಲಿ ದಿನಗೂಲಿ ನೌಕರರೇ ಅಧಿಕವಾಗಿದ್ದಾರೆ. ಏಕಾಏಕಿ ಲಾಕ್ಡೌನ್ ಘೋಷಿಸಿರು ವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಸಣ್ಣ ಕೈಗಾರಿಕೆಗಳು, ಫ್ಯಾಕ್ಟರಿಗಳು ಮುಚ್ಚಿರುವುದರಿಂದ ವಲಸೆ ಬಂದಂತಹ ಲಕ್ಷಾಂತರ ಕಾರ್ಮಿಕರು ತಮ್ಮ ಊರುಗಳನ್ನು ಸೇರಲು ಹೆಣಗಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.