ಲಾಕ್ಡೌನ್ 4.0 ಯಲ್ಲಿ ಬಸ್ ಸಂಚಾರಕ್ಕೆ ವಿನಾಯಿತಿ ನೀಡಲಾಗಿರುವುದರಿಂದ ಅಂತರಜಿಲ್ಲಾ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಗರಿಷ್ಠ ಸಂಖ್ಯೆಯಲ್ಲಿ ಬಸ್ಗಳು ಸಂಚಾರ ನಡೆಸಲಿವೆ. ಸಂಚರಿಸಬೇಕಾದ ಮಾರ್ಗಗಳು ಮತ್ತು ಪ್ರಯಾಣದ ವೇಳಾಪಟ್ಟಿ ಅಂತಿಮಗೊಳಿಸಲು ಎಲ್ಲ ಡಿಪೊಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಸಾರಿಗೆ ಸಚಿವ ಎ.ಕೆ.ಶಶೀಂದ್ರನ್ ತಿಳಿಸಿದ್ದಾರೆ.