ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯವನ್ನೇ ಲಾಕ್‌ಡೌನ್‌ ಮಾಡುವ ಕುರಿತು ಸಂಜೆಯೊಳಗೆ ನಿರ್ಧಾರ: ಸಿಎಂ

ವಿರೋಧ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ
Last Updated 23 ಮಾರ್ಚ್ 2020, 8:32 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ 19 ಮಹಾಮಾರಿ ರಾಜ್ಯದಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದ ಪ್ರಮುಖರೂ ಇದ್ದರು. ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

– ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವರನ್ನೂ ನಿರ್ಬಂಧಿಸಲಾಗಿದೆ.

– ನಗರದ ಜನರ ಯಾರೂ ಹಳ್ಳಿಗಳಿಗೆ ಹೋಗಬಾರದು.

– ಇಂದಿರಾ ಕ್ಯಾಂಟೀನ್‌ನಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ದಿನವಿಡೀ ಉಚಿತ ಆಹಾರ

– ರಾಜ್ಯವನ್ನೇ ಲಾಕ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ವಿರೋಧ ಪಕ್ಷಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.

– ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದಲೇ ನಿಷೇಧಿಸಲಾಗಿದೆ.

– ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ. ಅದನ್ನು ನಾವು ಪಾಲಿಸುತ್ತೇವೆ.

– ವಿಕ್ಟೋರಿಯಾ ಆಸ್ಪತ್ರೆಗೆ 1000 ಹಾಸಿಗಳಗನ್ನು ಪೂರೈಸಲಾಗುತ್ತದೆ.

– ಹೋಂ ಕ್ವಾರಂಟೈನ್‌ನ ಮನೆಗಳ ಕುರಿತು ಅಧಿಸೂಚನೆ

– ಚುನಾಯಿತ ಪ್ರತಿನಿಧಿಗಳು, ಹೆದರಿ ಕಲಾಪಗಳಿಂದ ದೂರವಿರುವುದು ಸರಿಯಲ್ಲ ಎಂದು ಮೋದಿ ನಿರ್ಧರಿಸಿದ್ದಾರೆ. ಆದರೂ, ಕಲಾಪದಲ್ಲಿ ಚರ್ಚಿಸಿ ಮಾ 27ರ ನಂತರ ಮುಂದೂಡುವ ಕುರಿತು ಚಿಂತನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT